Kannada

Fact Check: ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆಯವರನ್ನು ಹೊರಗೆ ನಿಲ್ಲಿಸಿ ಅವಮಾನಿಸಿದ್ದು ನಿಜವೇ?

ವಯನಾಡ್ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸುವಾಗ ಪ್ರಿಯಾಂಕ ಗಾಂಧಿ ಪತಿ ಮತ್ತು ಮಗ ಮಾತ್ರ ಜೊತೆಗಿದ್ದು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ಇರಿಸಲಾಗಿದೆ ಎಂಬ ಹೇಳಿಕೆಯೊಂದಿಗೆ ಶೇರ್ ಮಾಡಿರುವ ವಿಡಿಯೋದಲ್ಲಿ ಖರ್ಗೆ ಅವರು ಬಾಗಿಲಿನ ಹೊರಗೆ ನಿಂತಿರುವ ದೃಶ್ಯಗಳೂ ಕಾಣಸಿಗುತ್ತವೆ.

Vinay Bhat

ಉಪಚುನಾವಣೆ ಕಾವು ಹೆಚ್ಚುತ್ತಿರುವ ವಯನಾಡಿನಲ್ಲಿ ರಾಜಕೀಯ ಚರ್ಚೆಗಳೂ ಜೋರಾಗಿ ನಡೆಯುತ್ತಿದೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್ 13, 2024 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಅಕ್ಟೋಬರ್ 23 ರಂದು ಪ್ರಿಯಾಂಕಾ ನಾಮಪತ್ರ ಸಲ್ಲಿಸಿದ್ದರು. ಆದರೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಟ್ಟು ಅವಮಾನಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹೇಳಲಾಗುತ್ತಿದೆ.

ವಯನಾಡ್ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸುವಾಗ ಪ್ರಿಯಾಂಕ ಗಾಂಧಿ ಪತಿ ಮತ್ತು ಮಗ ಮಾತ್ರ ಜೊತೆಗಿದ್ದು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗೆ ಇರಿಸಲಾಗಿದೆ ಎಂಬ ಹೇಳಿಕೆಯೊಂದಿಗೆ ಶೇರ್ ಮಾಡಿರುವ ವಿಡಿಯೋದಲ್ಲಿ ಖರ್ಗೆ ಅವರು ಬಾಗಿಲಿನ ಹೊರಗೆ ನಿಂತಿರುವ ದೃಶ್ಯಗಳೂ ಕಾಣಸಿಗುತ್ತವೆ.

Fact Check:

ಈ ಸುದ್ದಿ ನಿರಾಧಾರ ಎಂಬುದು ಸುದ್ದಿವಾಹಿನಿ ತನಿಖೆಯಿಂದ ತಿಳಿದು ಬಂದಿದ್ದು, ಖರ್ಗೆ ಸೇರಿದಂತೆ ಎಲ್ಲ ಮುಖಂಡರು ಜಿಲ್ಲಾಧಿಕಾರಿ ಚೇಂಬರ್‌ನಲ್ಲಿ ಹಾಜರಿದ್ದರು. ಸತ್ಯಾಸತ್ಯತೆ ಪರಿಶೀಲನೆಯ ಮೊದಲ ಹಂತದಲ್ಲಿ, ಘಟನೆಗೆ ಸಂಬಂಧಿಸಿದ ಚಿತ್ರಗಳು ಮತ್ತು ದೃಶ್ಯಗಳನ್ನು ಹುಡುಕಿದ್ದೇವೆ. ಆಗ ನಾಮಪತ್ರ ಸಲ್ಲಿಕೆಗೆ ಸಂಬಂಧಿಸಿದಂತೆ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಕೇರಳ ಫೇಸ್ ಬುಕ್ ನಲ್ಲಿ ಶೇರ್ ಮಾಡಿರುವ ಫೋಟೋಗಳು ನಮಗೆ ಕಂಡಿದ್ದು, ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಎಲ್ಲ ಪ್ರಮುಖರು ಪ್ರಿಯಾಂಕಾ ಜೊತೆ ಕುಳಿತಿರುವ ಚಿತ್ರಗಳನ್ನು ಕಾಣಬಹುದು.

ಚಿತ್ರದಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುತ್ತಿದ್ದು, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಇದ್ದಾರೆ. ಇವರಲ್ಲದೆ ಸೋನಿಯಾ ಗಾಂಧಿ, ಕೆ.ಸಿ. ವೇಣುಗೋಪಾಲ್ ಮತ್ತು ಪಾಣಕ್ಕಾಡ್ ಸೈಯದ್ ಸಾದಿಕ್ ಅಲಿ ಶಿಹಾಬ್ ತಂಗಳ್ ಕೂಡ ಉಪಸ್ಥಿತರಿದ್ದರು ಎಂದು ಫೇಸ್ ಬುಕ್ ಪೋಸ್ಟ್ ನಲ್ಲಿ ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ದೃಢೀಕರಣಕ್ಕಾಗಿ ಹೆಚ್ಚಿನ ವಿಡಿಯೋ ತುಣುಕನ್ನು ಪರಿಶೀಲಿಸಲಾಗಿದೆ. ANI ಯ ಯೂಟ್ಯೂಬ್ ಚಾನೆಲ್‌ನಲ್ಲಿ ನಾಮಪತ್ರ ಸಲ್ಲಿಸುವ ಸುದೀರ್ಘ ವಿಡಿಯೋ ಇದೆ. 20 ನಿಮಿಷಗಳ ಅವಧಿಯ ಈ ವೀಡಿಯೊದ ಮೊದಲ ಭಾಗದಲ್ಲಿ ಪ್ರಿಯಾಂಕಾ ಗಾಂಧಿ ಅವರ ಪತಿ ಮತ್ತು ಮಗ ಇದ್ದಾರೆ. ವೀಡಿಯೊದ 4:35 ಸೆಕೆಂಡ್​ನಲ್ಲಿ ಅವರಿಬ್ಬರೂ ಹೊರಟುಹೋದರು ಮತ್ತು ನಂತರ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಪ್ರವೇಶಿಸುತ್ತಾರೆ. ನಂತರ ಕೆ.ಸಿ.ವೇಣುಗೋಪಾಲ್ ಅವರು ಒಳ ಪ್ರವೇಶಿಸಿದಾಗ, 6:25 ನಿಮಿಷದ ವೇಳೆ ವಿಡಿಯೊದಲ್ಲಿ ಐದು ಜನರಿಗೆ ಮಾತ್ರ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಹೇಳುತ್ತಿರುವುದು ಕೇಳಿಬರುತ್ತಿದೆ. ಇದರೊಂದಿಗೆ, ಮೊದಲ ಹಂತದಲ್ಲಿ, ಕಾಗದಪತ್ರಗಳ ಸಲ್ಲಿಕೆ ಸಮಯದಲ್ಲಿ ಕಾನೂನುಬದ್ಧವಾಗಿ ಹಾಜರಾಗಬಹುದಾದ ಜನರ ಸಂಖ್ಯೆಯ ಮೇಲೆ ಮಿತಿ ಇರುವುದರಿಂದ ಎಲ್ಲರೂ ಒಟ್ಟಿಗೆ ಚೇಂಬರ್ ಪ್ರವೇಶಿಸಲಿಲ್ಲ ಎಂದು ಸೂಚಿಸಲಾಗಿದೆ.

ಇದನ್ನು ಖಚಿತಪಡಿಸಲು ನಡೆಸಿದ ತಪಾಸಣೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಯಲ್ಲೂ ಈ ಬಗ್ಗೆ ಸ್ಪಷ್ಟನೆ ನೀಡಿರುವುದು ಕಂಡುಬಂದಿದೆ.

ನಂತರ ನಾಮಪತ್ರ ಸಲ್ಲಿಕೆ ವೇಳೆ ಉಪಸ್ಥಿತರಿದ್ದ ಸ್ಥಳೀಯ ಪತ್ರಕರ್ತರೊಬ್ಬರೊಂದಿಗೆ ಮಾತನಾಡಿದ್ದಾರೆ. ಅವರ ಪ್ರತಿಕ್ರಿಯೆ:

‘‘ಪ್ರಿಯಾಂಕಾ ಗಾಂಧಿ ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಡಲಾಗಿತ್ತು ಎಂಬ ಪ್ರಚಾರ ನಿರಾಧಾರ. ಪ್ರಿಯಾಂಕಾ ಅವರೊಂದಿಗೆ ಕಲೆಕ್ಟರ್ ಚೇಂಬರ್‌ಗೆ ಮೊದಲು ಪ್ರವೇಶಿಸಿದವರು ಆಕೆಯ ಪತಿ, ಮಗ ಮತ್ತು ಸೋನಿಯಾ ಗಾಂಧಿ. ನಂತರ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಆಗಮಿಸಿದರು. ಒಂದು ಬಾರಿಗೆ ಅಭ್ಯರ್ಥಿ ಸೇರಿದಂತೆ ಐವರು ಮಾತ್ರ ಚೇಂಬರ್ ಒಳಗೆ ಬರಬಹುದಾಗಿದ್ದು, ಉಳಿದವರು ಹೊರಗೇ ಉಳಿದುಕೊಂಡಿದ್ದಾರೆ. ನಂತರ ನಾಮಪತ್ರ ಸಲ್ಲಿಕೆ ಮುಗಿಯುತ್ತಿದ್ದಂತೆ ಪತಿ-ಮಗ ಹೊರ ನಡೆದಿದ್ದು, ರಾಹುಲ್ ಗಾಂಧಿ ಮತ್ತು ಖರ್ಗೆ ಅವರು ಒಳಗೆ ಬಂದರು. ಇಲ್ಲಿ ಚುನಾವಣಾ ಆಯೋಗದ ನಿಯಮಗಳನ್ನು ಪಾಲಿಸಲಾಗಿದೆ,’’

ಹೀಗಾಗಿ ವಯನಾಡ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಡಲಾಗಿದೆ ಎಂಬ ಸುದ್ದಿ ತಪ್ಪುದಾರಿಗೆಳೆಯುವಂತಿದೆ. ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿ ಸೇರಿದಂತೆ ಐವರು ಮಾತ್ರ ಹಾಜರಿರಬೇಕು ಎಂಬ ನಿಯಮವಿದ್ದ ಕಾರಣ ಮೊದಲ ಹಂತದಲ್ಲಿ ಪತಿ-ಮಗ ಪ್ರವೇಶಿಸಿ ನಂತರ ಹೊರಬಂದು ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಒಳ ಬಂದಿರುವುದು ತನಿಖೆಯಿಂದ ತಿಳಿದುಬಂದಿದೆ.

Fact Check: Hindus vandalise Mother Mary statue during Christmas? No, here are the facts

Fact Check: തിരുവനന്തപുരത്ത് 50 കോടിയുടെ ഫയല്‍ ഒപ്പുവെച്ച് വി.വി. രാജേഷ്? പ്രചാരണത്തിന്റെ സത്യമറിയാം

Fact Check: நாம் தமிழர் கட்சியினர் நடத்திய போராட்டத்தினால் அரசு போக்குவரத்து கழகம் என்ற பெயர் தமிழ்நாடு அரசு போக்குவரத்து கழகம் என்று மாற்றப்பட்டுள்ளதா? உண்மை அறிக

Fact Check: ಇಸ್ರೇಲಿ ಪ್ರಧಾನಿ ನೆತನ್ಯಾಹು ಮುಂದೆ ಅರಬ್ ಬಿಲಿಯನೇರ್ ತೈಲ ದೊರೆಗಳ ಸ್ಥಿತಿ ಎಂದು ಕೋವಿಡ್ ಸಮಯದ ವೀಡಿಯೊ ವೈರಲ್

Fact Check: జగపతి బాబుతో జయసుధ కుమారుడు? కాదు, అతడు WWE రెజ్లర్ జెయింట్ జంజీర్