Kannada

Fact Check: ‘ಉಚಿತ ಗುಂಡಿ ಭಾಗ್ಯ' ಎಂದು ವೈರಲ್ ಆಗಿರುವ ವೀಡಿಯೊ ಕರ್ನಾಟಕದ್ದಲ್ಲ, ಇದು ಗುಜರಾತ್‌ನಲ್ಲಿ ನಡೆದ ಘಟನೆ

ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದೆ. ಇದರಲ್ಲಿ ಮಳೆ ನೀರಿನಿಂದ ತುಂಬಿರುವ ರಸ್ತೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ದಂಪತಿ ದೊಡ್ಡ ಗುಂಡಿಗೆ ಬಿದ್ದು ಅಪಘಾತಕ್ಕೀಡಾಗುವ ದೃಶ್ಯ ಕಾಣಬಹುದು. ಹಲವರು ಇದನ್ನು ಕರ್ನಾಟಕದ ರಸ್ತೆ ಎಂದು ಹೇಳಿ ಹಂಚಿಕೊಳ್ಳುತ್ತಿದ್ದಾರೆ.

Vinay Bhat

ಸಾಮಾಜಿಕ ಜಾಲತಾಣಗಳಲ್ಲಿ ಒಂದು ವೀಡಿಯೊ ವೈರಲ್ ಆಗುತ್ತಿದೆ. ಇದರಲ್ಲಿ ಮಳೆ ನೀರಿನಿಂದ ತುಂಬಿರುವ ರಸ್ತೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ದಂಪತಿ ದೊಡ್ಡ ಗುಂಡಿಗೆ ಬಿದ್ದು ಅಪಘಾತಕ್ಕೀಡಾಗುವ ದೃಶ್ಯ ಕಾಣಬಹುದು. ಹಲವರು ಇದನ್ನು ಕರ್ನಾಟಕದ ರಸ್ತೆ ಎಂದು ಹೇಳಿ ಹಂಚಿಕೊಳ್ಳುತ್ತಿದ್ದಾರೆ.

ಫೇಸ್​ಬುಕ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಅಪ್ಲೋಡ್ ಮಾಡಿ, ‘‘ನಮ್ಮ ಸರ್ಕಾರ ಉಚಿತವಾಗಿ ಗುಂಡಿ ಭಾಗ್ಯಗಳನ್ನು ಕೊಟ್ಟಿದೆ ಆ ಕರ್ಮಕ್ಕೆ ನೀವು ಹುಷಾರಾಗಿರಿ, ಇಂತ ಗುಂಡಿ ಕಂಡಲ್ಲಿ ಅದರ ಸುತ್ತ ಕಲ್ಲಿಡಿ ಜನಜಾಗೃತಿ ಮಾಡಿ. ಕರ್ನಾಟಕ ಗಂಧದಗುಡಿ ಅಲ್ಲ ಗುಂಡಿಗಳ ಗುಡಿ’’ ಎಂದು ಬರೆದುಕೊಂಡಿದ್ದಾರೆ. (Archive)

Fact Check

ಈ ಸುದ್ದಿಯ ಸತ್ಯಾಸತ್ಯತೆಯನ್ನು ಸೌತ್ ಚೆಕ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಇದು ಕರ್ನಾಟಕದಲ್ಲಿ ನಡೆದ ಘಟನೆ ಅಲ್ಲ, ಬದಲಾಗಿ ಗುಜರಾತ್​ನ ಜುನಾಗಢ್​ನಲ್ಲಿ ಸಂಭವಿಸಿದೆ.

ವೈರಲ್ ವಿಡಿಯೊದ ಪ್ರಮುಖ ಫ್ರೇಮ್‌ಗಳನ್ನು ಗೂಗಲ್ ಲೆನ್ಸ್ ಸಹಾಯದಿಂದ ಹುಡುಕಿದಾಗ, ಜುಲೈ 3 ರಂದು ಇಂಡಿಯಾ ಟುಡೆ ವೈರಲ್ ವೀಡಿಯೊದ ಸ್ಕ್ರೀನ್ ಶಾಟ್​ನೊಂದಿಗೆ ಸುದ್ದಿ ಪ್ರಕಟಿಸಿರುವುದು ಸಿಕ್ಕಿದೆ. ಇದರಲ್ಲಿರುವ ಮಾಹಿತಿಯ ಪ್ರಕಾರ, ಈ ಘಟನೆ ಗುಜರಾತ್‌ನ ಜುನಾಗಢ್​ನಲ್ಲಿ ನಡೆದಿದೆ. ಮಳೆ ನೀರಿನಿಂದ ಸಂಪೂರ್ಣ ಮುಚ್ಚಿಹೋಗಿದ್ದ ದೊಡ್ಡ ಗುಂಡಿ ಕಾಣಿಸದೇ ಹೋಗಿದ್ದರಿಂದ ಬೈಕ್‌ನ ಮುಂಭಾಗದ ಚಕ್ರ ಅದರಲ್ಲಿ ಸಿಲುಕಿದ್ದು, ದಂಪತಿ ರಸ್ತೆಗೆ ಎಸೆಯಲ್ಪಟ್ಟಿದ್ದರು. ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಬರೆಯಲಾಗಿದೆ.

ಟೈಮ್ಸ್ ನೌ ಕೂಡ ಜುಲೈ 2 ರಂದು ಇದೇ ವೈರಲ್ ವೀಡಿಯೊದ ಸ್ಕ್ರೀನ್ ಶಾಟ್​ನೊಂದಿಗೆ ಸುದ್ದಿ ಪ್ರಕಟಿಸಿದ್ದು, ಗುಜರಾತ್‌ನ ಜುನಾಗಢ ಜಿಲ್ಲೆಯ ಆಜಾದ್ ಚೌಕ್ ಪ್ರದೇಶದಲ್ಲಿ ದಂಪತಿಯೊಬ್ಬರು ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ತೆರೆದ ಒಳಚರಂಡಿ ಹೊಂಡಕ್ಕೆ ಬಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಮಳೆಗಾಲಕ್ಕೂ ಮುನ್ನ ನಾಗರಿಕ ಸುರಕ್ಷತೆ ಮತ್ತು ಪುರಸಭೆಯ ಮುಚ್ಚದ ಚರಂಡಿಗಳನ್ನು ನಿರ್ವಹಿಸುವ ಬಗ್ಗೆ ಮತ್ತೊಮ್ಮೆ ಕಳವಳ ವ್ಯಕ್ತವಾಗಿದೆ ಎಂದು ಬರೆಯಲಾಗಿದೆ.

ET Now ಜುಲೈ 4 ರಂದು ತನ್ನ ಫೇಸ್​ಬುಕ್ ಪೇಜ್​ನಲ್ಲಿ ವೈರಲ್ ವೀಡಿಯೊವನ್ನು ಹಂಚಿಕೊಂಡು, ಗುಜರಾತ್‌ನ ಜುನಾಗಢ್‌ನಲ್ಲಿ ಮಳೆಯ ನಂತರ ರಸ್ತೆ ಮೇಲೆ ನೀರು ತುಂಬಿದ್ದ ದೊಡ್ಡ ಗುಂಡಿಗೆ ದ್ವಿಚಕ್ರ ವಾಹನ ಬಿದ್ದ ಪರಿಣಾಮ 35 ವರ್ಷದ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದೆ.

ಈ ಘಟನೆ ಗುಜರಾತ್‌ನ ಜುನಾಗಢ್‌ನಲ್ಲಿ ನಡೆದಿದೆ ಎಂದು ಹೇಳುವ ಇನ್ನೂ ಅನೇಕ ವರದಿಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದು. ಹಾಗೆಯೆ ಕರ್ನಾಟಕದಲ್ಲಿ ಈ ಘಟನೆ ನಡೆದಿದೆ ಎಂಬ ಬಗ್ಗೆ ಯಾವುದೇ ವಿಶ್ವಾಸರ್ಹ ಮಾಧ್ಯಮ ಸುದ್ದಿ ವರದಿ ಪ್ರಕಟಿಸಿಲ್ಲ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಬೈಕ್ ಸವಾರಿ ಮಾಡುತ್ತಿದ್ದ ದಂಪತಿ ದೊಡ್ಡ ಗುಂಡಿಗೆ ಬಿದ್ದು ಅಪಘಾತಕ್ಕೀಡಾಗುವ ದೃಶ್ಯ ಕರ್ನಾಟಕದ್ದಲ್ಲ ಇದು ಗುಜರಾತ್​ನದ್ದು ಎಂದು ನಾವು ಖಚಿತವಾಗಿ ಹೇಳುತ್ತೇವೆ.

Fact Check: Delhi Police arrest CJP supporters after protest was called off? No, unrelated video goes viral

Fact Check: കോക്രോച്ച് പാര്‍ട്ടി പ്രവര്‍ത്തകരെ തൂക്കിലേറ്റാന്‍ ആഹ്വാനം ചെയ്ത് കേന്ദ്രമന്ത്രി പീയൂഷ് ഗോയല്‍? വീഡിയോയുടെ സത്യമറിയാം

Fact Check: ஜனநாயகன் படம் பார்க்க வந்தாரா முதல்வர் விஜய்யின் மனைவி சங்கீதா? உண்மைப் என்ன

Fact Check: ಸಿಜೆಪಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಮಹಿಳೆಯರನ್ನು ಥಳಿಸಿದ್ದಾರೆಯೇ? ಸುಳ್ಳು, ಸತ್ಯ ಇಲ್ಲಿದೆ

Fact Check: సీజేపీ కార్యకర్తలను ఉరితీయాలని కేంద్ర మంత్రి పీయూష్ గోయల్ అన్నారా? కాదు, వైరల్ వీడియో డీప్‌ఫేక్