Kannada

Fact Check: ಬನ್ನೇರುಘಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಮೈಸೂರಿನ ಹಳೆಯ ವೀಡಿಯೊ ವೈರಲ್

ಬೆಂಗಳೂರಿನಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿದೆ ಎಂಬ ಹೇಳಿಕೆ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ. ವೈರಲ್ ಆಗಿರುವ ಈ ವೀಡಿಯೊ 2022 ರ ನವೆಂಬರ್​ನಲ್ಲಿ ಮೈಸೂರಿನಲ್ಲಿ ನಡೆದ ಘಟನೆಯದ್ದಾಗಿದೆ.

vinay bhat

ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ಚಿರತೆಯೊಂದು ವಸತಿ ಪ್ರದೇಶದ ಮೂಲಕ ಓಡಿಹೋಗಿ ಮೋಟಾರ್‌ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತೋರಿಸಲಾಗಿದೆ. ವೈರಲ್ ಪೋಸ್ಟ್ ಇದು ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಇತ್ತೀಚೆಗೆ ನಡೆದ ಘಟನೆ ಎಂದು ಹೇಳುತ್ತದೆ.

ಇನ್​​ಸ್ಟಾಗ್ರಾಮ್ ಬಳಕೆದಾರರೊಬ್ಬರು ಈ ವೀಡಿಯೊವನ್ನು ಹಂಚಿಕೊಂಡು, ‘‘ಬೆಂಗಳೂರಿನ ಬನ್ನೇರುಘಟ್ಟ ಬಳಿ ಚಿರತೆ ಕಂಡುಬಂದಿದೆ’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಸೌತ್ ಚೆಕ್ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವೀಡಿಯೊ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಈ ವೀಡಿಯೊ 2022 ರದ್ದಾಗಿದ್ದು, ಮೈಸೂರಿನಲ್ಲಿ ನಡೆದ ಘಟನೆ ಆಗಿದೆ.

ನಿಜಾಂಶವನ್ನು ತಿಳಿಯಲು ನಾವು ವೈರಲ್ ವೀಡಿಯೊದ ವಿವಿಧ ಕೀಫ್ರೇಮ್​ಗಳನ್ನು ಗೂಗಲ್ ಲೆನ್ಸ್ ಸಹಾಯದಿಂದ ಹುಡುಕಿದ್ದೇವೆ. ಆಗ ಇದೇ ವೈರಲ್ ವೀಡಿಯೊವನ್ನು ನಾವು ನವೆಂಬರ್ 4, 2022 ರಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಕಂಡುಕೊಂಡೆವು. ಇದರಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ‘‘ಮೈಸೂರಿನಲ್ಲಿ ಚಿರತೆ ಜನರ ಮೇಲೆ ದಾಳಿ ಮಾಡುವ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಮೈಸೂರಿನ ಕನಕ ನಗರದಲ್ಲಿ ಈ ಘಟನೆ ನಡೆದಿದೆ. ವೀಡಿಯೊದಲ್ಲಿ ಚಿರತೆ ಬೀದಿಯಲ್ಲಿ ಓಡಿಹೋಗಿ ಬೈಕ್‌ನಲ್ಲಿ ಬಂದ ವ್ಯಕ್ತಿಯ ಮೇಲೆ ಧಾವಿಸುತ್ತಿರುವುದು ಕಂಡುಬರುತ್ತದೆ. ದಿಗ್ಭ್ರಮೆಗೊಂಡ ಬೈಕ್ ಸವಾರ ತನ್ನ ವಾಹನದಿಂದ ಬೀಳುತ್ತಾನೆ. ನಂತರ ಚಿರತೆ ಓಡಿಹೋಗುವುದನ್ನು ಮತ್ತು ಸ್ಥಳೀಯರು ಅದನ್ನು ಬೆನ್ನಟ್ಟುವುದನ್ನು ಕಾಣಬಹುದು’’ ಎಂದು ಬರೆಯಾಗಿದೆ.

ಹಾಗೆಯೆ ನವೆಂಬರ್ 4, 2022 ರಂದು ದಿ ಎಕನಾಮಿಕ್ ಟೈಮ್ಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಕೂಡ ಇದೇ ವೈರಲ್ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ‘‘ಮೈಸೂರಿನ ಜನವಸತಿ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ, ಕೆಲವು ಜನರ ಮೇಲೆ ದಾಳಿ ಮಾಡಿದೆ; ನಂತರ ಅರಣ್ಯ ಇಲಾಖೆಯಿಂದ ಸೆರೆಹಿಡಿಯಲ್ಪಟ್ಟಿದೆ" ಎಂಬ ವಿವರಣೆ ನೀಡಲಾಗಿದೆ.

ಇದೇ ವೀಡಿಯೊವನ್ನು ನವೆಂಬರ್ 2022 ರಲ್ಲಿ ಇತರ ಸುದ್ದಿ ವೆಬ್‌ಸೈಟ್‌ಗಳ ವಿವಿಧ ಯೂಟ್ಯೂಬ್ ಚಾನೆಲ್‌ಗಳಲ್ಲಿ ಅಪ್‌ಲೋಡ್ ಮಾಡಿರುವುದನ್ನು ನೀವು ಇಲ್ಲಿ, ಇಲ್ಲಿ ನೋಡಬಹುದು. ಇದು ಮೈಸೂರಿನಲ್ಲಿ ನಡೆದ ಘಟನೆ ಎಂದು ಇದರಲ್ಲಿ ಹೇಳಲಾಗಿದೆ.

ಇನ್ನು ನವೆಂಬರ್ 4, 2022 ರಂದು NDTV ಹಾಗೂ ನವೆಂಬರ್ 5, 2022 ರಂದು ಟೈಮ್ಸ್ ಆಫರ್ ಇಂಡಿಯಾ ವೈರಲ್ ವೀಡಿಯೊದ ಸ್ಕ್ರೀನ್ ಶಾಟ್​ನೊಂದಿಗೆ ಇದು ಮೈಸೂರಿನಲ್ಲಿ ನಡೆದಿರುವ ಘಟನೆ ಎಂದು ಸುದ್ದಿ ಪ್ರಕಟಿಸಿದೆ.

ಹೀಗಾಗಿ ಈ ಎಲ್ಲ ಮಾಹಿತಿಯ ಆಧಾರದ ಮೇಲೆ ಬೆಂಗಳೂರಿನಲ್ಲಿ ಇತ್ತೀಚೆಗೆ ಚಿರತೆ ಕಾಣಿಸಿಕೊಂಡಿದೆ ಎಂಬ ಹೇಳಿಕೆ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ. ವೈರಲ್ ಆಗಿರುವ ಈ ವೀಡಿಯೊ 2022 ರ ನವೆಂಬರ್​ನಲ್ಲಿ ಮೈಸೂರಿನಲ್ಲಿ ನಡೆದ ಘಟನೆಯದ್ದಾಗಿದೆ.

Fact Check: అల్ల‌ర్ల‌కు పాల్ప‌డిన వ్య‌క్తుల‌కు శిరో ముండ‌నం చేసి ఊరేగించినది యూపీలో కాదు.. నిజం ఇక్క‌డ తెలుసుకోండి

Fact Check: Tel Aviv on fire amid Israel-Iran conflict? No, video is old and from China

Fact Check: സര്‍ക്കാര്‍ സ്കൂളില്‍ ഹജ്ജ് കര്‍മങ്ങള്‍ പരിശീലിപ്പിച്ചോ? വീഡിയോയുടെ വാസ്തവം

Fact Check: ஷங்கர்பள்ளி ரயில் தண்டவாளத்தில் இஸ்லாமிய பெண் தனது காரை நிறுத்திவிட்டு இறங்க மறுத்தாரா? உண்மை அறிக

Fact Check: ಪ್ರಯಾಗ್‌ರಾಜ್‌ನಲ್ಲಿ ಗಲಭೆ ನಡೆಸಿದವರ ವಿರುದ್ಧ ಯುಪಿ ಪೊಲೀಸರು ಕ್ರಮ? ಇಲ್ಲಿ, ಇದು ರಾಜಸ್ಥಾನದ ವೀಡಿಯೊ